ಬುಧವಾರ, ಸೆಪ್ಟೆಂಬರ್ 19, 2012

  • ಸತ್ತ ಮೇಲೆ ಸಿಕ್ಕುವ ಸ್ವರ್ಗಕ್ಕಾಗಿ ಇಂದಿನ ಬಾಳನ್ನು ನರಕಸದೃಶವಾಗಿ ಮಾಡಿಕೊಳ್ಳುವುದು ಬೇಡ. ಇಂದಿನ ಇರುವಿಕೆಯನ್ನು ತಿಳಿವಳಿಕೆಯಿಂದ ತಿದ್ದಿಕೊಂಡರೆ ಇದೇ  ಸ್ವರ್ಗ .
  • ಪ್ರತಿಯೊಬ್ಬನಿಗೂ ಒಂದು ಬಾಳಿನ ತತ್ವ ಬೇಕು. ಮಾನವ ಜೀವನವನ್ನು ಇಂದಿನಕಿಂತಲೂ ಹೆಚ್ಚು ಸುಗಮವನ್ನಾಗಿ, ಆದರ್ಶಪ್ರಾಯವನ್ನಾಗಿ ಮಾಡುವಂತಹ ತತ್ವ ಬೇಕು.
  • ದೇವನಿಗೂ ಒಂದು ಆತ್ಮಗೌರವ ಎಂಬುದಿದೆ. ಬೇರಾವ ಪ್ರಾಣಿಗೂ ಕೊಡಲಾರದಂತಹ ಬುದ್ಧಿಶಕ್ತಿ ಒಂದನ್ನು ದೇವನು ಮಾನವನಿಗೆ ಮಾತ್ರ  ಇತ್ತಿದ್ದಾನೆ. ಇದರ ಸದುಪಯೋಗ ಮಾಡದಿರುವುದೇ ದೈವದ್ರೋಹ.
  • ದೇವನು ಸರ್ವಾಂತರ್ಯಾಮಿ ಮತ್ತು ಪ್ರತಿಯೊಬ್ಬರಲ್ಲಿಯೂ ಇದ್ದಾನೆ ಎಂಬ ವೇದವಾಕ್ಯವನ್ನು ಎಲ್ಲ ಸೊಸೆಯರೂ ಒಪ್ಪುತ್ತಾರೆ. ಆದರೆ ಎಲ್ಲದರಲ್ಲಿಯೂ ಇರುವ ಅದೇ ದೇವರು ಅದೇಕೆ ತನ್ನ ಅತ್ತೆಯಲ್ಲಿ ಇರುವುದಿಲ್ಲ? ಅತ್ತೆಯೊಡನೆ ಹಣಾಹಣಿ ಜಗಳವಾಡುತ್ತಾಳೆ. ದುಷ್ಟ ಶಬ್ದಗಳಿಂದ ಬೈಯುತ್ತಾಳೆ.
  • " ಕಾಲ ಎಷ್ಟು ಕೆಟ್ಟಿದೆ  ನೋಡಿ, ನಮ್ಮ ಹಿಂದೂ ಸಂಸ್ಕೃತಿಯೇ ಹಾಳಾಗಿಹೋಗಿದೆ,  ಅಲ್ಲಿರುವ ಆ ಇಬ್ಬರಲ್ಲಿ ಗಂಡು ಯಾರು ಹೆಣ್ಣು ಯಾರು ನೀವೇ ಹೇಳಿ ಸಾರ್" ಎಂದಂದೆ.  
          ಒಂದರೆ ನಿಮಿಷ ಆ `ಸಾರ್' ನನ್ನನ್ನು ದುರುಗುಟ್ಟಿ ನೋಡಿತು.
          " ಏನ್ರೀ ನೀವು  ಮಾತನಾಡೋದು?  ಏನು ಮರ್ಯಾದೆ ಎಂಬುದೇ ಇಲ್ಲವೇ? ನನಗೆ ಸಾರ್ ಅಂತೀರಾ ನೀವು? ನಾನು                                                   ಆ ಎರಡೂ ಮಕ್ಕಳ ತಾಯಿ, ತಿಳೀತೆ?"
ಇವತ್ತಿಗೆ ಇಷ್ಟು. ಇನ್ನುಶುಕ್ರವಾರ.  ಈಗ ನನ್ನದೊಂದು ಮುಕ್ತಕ.

ತಲೆಮಾರಿನ ಅಂತರ 
"ಕುಂಟುವುದೇಕಜ್ಜ?" ಕೇಳಿದೆ ತಾತನ 
"ಹೆಬ್ಬುಲಿ ಕಚ್ಚಿತು" ಎಂದ.
ಮೊಮ್ಮಗ ತಿಂಗಳು ಹಾಸಿಗೆ ಹಿಡಿದನು 
ಚಪ್ಪಲಿ ಕಚ್ಚಿದ್ದರಿಂದ!


ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ